ನಾಮನಿರ್ದೇಶಿತರಾಗಿ ಎಂ.ಆರ್. ಸೀತಾರಾಮ್, ಸುಧಾಂ ದಾಸ್, ಉಮಾಶ್ರೀ ಹೆಸರಿಗೆ ರಾಜ್ಯಪಾಲರ ಅಂಕಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶಿತರಾಗಿ ಎಂ.ಆರ್.ಸೀತಾರಾಮ್, ಸುಧಾಂ ದಾಸ್ ಹಾಗೂ ಉಮಾಶ್ರೀ ಹೆಸರಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮೂವರ ಹೆಸರನ್ನು ನಾಮನಿರ್ದೇಶನಕ್ಕಾಗಿ ಶಿಫಾರಸು ಮಾಡಿತ್ತು. ಆದರೆ ಮೂವರು ನಾಮನಿರ್ದೇಶನ ಶಿಫಾರಸ್ಸಿಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿತ್ತು.

ಹಿರಿಯ ಸಚಿವರ ಆಕ್ಷೇಪದ ಮಧ್ಯೆಯೂ ಕಾಂಗ್ರೆಸ್ ಹೈ ಕಮಾಂಡ್ ಸುಧಾಂ ದಾಸ್​ಗೆ ಮಣೆ ಹಾಕಿದೆ.‌ ಸುಧಾಂ‌ ದಾಸ್ ನಿವೃತ್ತ ಇಡಿ ಅಧಿಕಾರಿಯಾಗಿದ್ದಾರೆ. ಸುಧಾಂ ದಾಸ್ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ಬಲವಾಗಿ ಬ್ಯಾಟಿಂಗ್ ಮಾಡಿದ್ದರು. ಆದರೆ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ ಅವರು ಸುಧಾಂ‌ ದಾಸ್ ನಾಮನಿರ್ದೇಶನದ ಶಿಫಾರಸು ವಿರುದ್ಧ ಪತ್ರ ಬರೆದಿದ್ದರು.‌

ಆದ್ರೆ ಇದೀಗ ಎಂ.ಆರ್.ಸೀತಾರಾಮ್, ಸುಧಾಂ ದಾಸ್ ಹಾಗೂ ಉಮಾಶ್ರೀ ಹೆಸರಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!