ಹೊಸದಿಗಂತ ವರದಿ ಮೈಸೂರು:
ಅರಮನೆ ನಗರಿ ಮೈಸೂರಿನಲ್ಲಿ ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆಗೆ ಸಿಗಲಿದೆ. ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳು ನಡೆಯುತ್ತಿದ್ದು, ಇಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಿ ಬಾನೋತ್ ಅವರು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂಬಂಧ ವಾಹನ ನಿಲುಗಡೆಗೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ , ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.
ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅರ್ಷದ್ ಉರ್ ರೆಹಮಾನ್ ಷರೀಫ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.