ಲಡಾಖ್ ಜನರ ಸಮಸ್ಯೆಗಳ ಬಗ್ಗೆ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ: ರಾಹುಲ್ ಗಾಂಧಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲಡಾಖ್ ಜನರ ಸಮಸ್ಯೆಗಳ ಬಗ್ಗೆ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಲಡಾಖ್ ಜನರ ರಾಜಕೀಯ ಧ್ವನಿಯನ್ನು ಹತ್ತಿಕ್ಕಲಾಗಿದ್ದು, ಉದ್ಯೋಗ ಖಾತ್ರಿಯ ಬಗ್ಗೆ ಕೇಂದ್ರ ಸರ್ಕಾರವು ಸುಳ್ಳು ಭರವಸೆ ನೀಡಿದೆ ಎಂದು ಆರೋಪಿಸಿದ್ದಾರೆ.

ಲಡಾಖ್‌ ಜನರ ರಾಜಕೀಯ ಧ್ವನಿಯನ್ನು ದಮನಿಸಲಾಗುತ್ತಿದೆ. ಜನರಿಗೆ ಉದ್ಯೋಗ ಬಗ್ಗೆ ಸರ್ಕಾರ ನೀಡಿದ ಭರವಸೆಗಳೆಲ್ಲ ಸುಳ್ಳಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನು ಲಡಾಖ್‌ನ ಮೂಲೆ ಮೂಲೆಗೆ ಹೋಗಿ ಅಲ್ಲಿನ ಜನರ ಜೊತೆ ಬೆರೆತು ಅವರ ಸಮಸ್ಯೆಗಳ ಬಗ್ಗೆ ಆಲಿಸಿದ್ದೇನೆ. ಭಾರತದ ಸಾವಿರಾರು ಕಿಲೋಮೀಟರ್ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ. ಇದನ್ನು ನಿರಾಕರಿಸಿರುವ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ. ಲಡಾಖ್‌ನಲ್ಲಿರುವ ಪ್ರತಿಯೊಬ್ಬ ನಾಗರಿಕನಿಗೂ ಇದರ ಬಗ್ಗೆ ಗೊತ್ತಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!