ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ:‌ ಚಾಲನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಬಹುನಿರೀಕ್ಷೆಯ ಕಾಂಗ್ರೆಸ್‌ನ 4ನೇ ಗ್ಯಾರೆಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಚಾಲನೆ ಸಿಗಲಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾರ್ಯಕ್ರಮ ಶುರುವಾಗಲಿದ್ದು, ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇದೊಂದು ಐತಿಹಾಸಿಕ ದಿನ ಎಂದು ಬಣ್ಣಿಸಿರುವ ಸಿದ್ದರಾಮಯ್ಯ, ʻವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆʼ.

ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ.

ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!