ಮತ್ತೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 10 IPS ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದಿಂದ ಮತ್ತೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 10 IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸಲಾಗಿದೆ. ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ, ಕುಶಾಲ್ ಚೌಕ್ಸೆ. ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಸಿದ್ದಾರ್ಥ್ ಗೋಯಲ್ ನೇಮಕವಾದರ, ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ರೋಹನ್ ಜಗದೀಶ್ ಅವರು ನೇಮಕಗೊಂಡಿದ್ದಾರೆ.

ಬೆಂಗಳೂರು ಉಗ್ರರ ನಿಗ್ರಹ ದಳ ಎಸ್​ಪಿಯಾಗಿ ಶಿವಾನ್ಷು ರಜಪೂತ್, ಉಡುಪಿ ಎಎನ್ಎಫ್ ಎಸ್​ಪಿ ಆಗಿ ಜಿತೇಂದ್ರ ಕುಮಾರ್ ದಯಾಮ, ಕೆಎಸ್​ಆರ್​ಪಿ ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಎಂ.ಎನ್.ದೀಪನ್ ಹಾಗೂ ಬೆಂಗಳೂರು ವೈರ್​ಲೆಸ್ ವಿಭಾಗದ ಎಸ್​ಪಿಯಾಗಿ ಹೆಚ್.ಎನ್.ಮಿಥುನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!