ಸನಾತನ ಧರ್ಮದ ವಿರುದ್ದದ ವಿವಾದಾತ್ಮಕ ಹೇಳಿಕೆಗೆ ತಕ್ಕ ಪ್ರತಿಕ್ರಿಯೆ ಅಗತ್ಯವಿದೆ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ತಕ್ಕ ಪ್ರತಿಕ್ರಿಯೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು , ಇತಿಹಾಸಕ್ಕೆ ಹೋಗಬೇಡಿ, ಆದರೆ ಸಂವಿಧಾನದ ಪ್ರಕಾರ ಸತ್ಯಗಳಿಗೆ ಅಂಟಿಕೊಳ್ಳಿ ಸಮಸ್ಯೆಯ ಸಮಕಾಲೀನ ಪರಿಸ್ಥಿತಿಯ ಬಗ್ಗೆ ಮಾತನಾಡಿ ಎಂದು ಪ್ರಧಾನಿ ಹೇಳಿದ್ದಾರೆ.

ಹೊಸ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನವನ್ನು ಕೇಂದ್ರ ಸರಕಾರ ನೀಡದೇ ಇರುವುದು ಸನಾತನ ಧರ್ಮದ ಸಾಧಕರ ತಾರತಮ್ಯಕ್ಕೆ ಉದಾಹರಣೆ ಎಂದು ಉದಯನಿಧಿ ಸ್ಟಾಲಿನ್ ಉಲ್ಲೇಖನಕ್ಕೆ ಪ್ರಧಾನಿ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!