ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.
ನಿರಂಜನ್ (42) ಚೆನ್ನಮ್ಮ (67) ಕಾರು ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದು, ಗಂಭೀರ ಗಾಯಗೊಂಡ ಮಹಿಳೆ ರತ್ನಮ್ಮ ಎಂಬುವವರವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇನ್ನು ಮೃತರು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.