ದೆಹಲಿಯಲ್ಲಿ ಭಾರೀ ಮಳೆ: ವಿಡಿಯೋ ಹಂಚಿಕೊಂಡು 2,700 ಕೋಟಿ ರೂ. ವ್ಯರ್ಥ ಎಂದು ಕಾಂಗ್ರೆಸ್‌ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರ ರಾಜಧಾನಿ ದೆಹಲಿಯ ಭಾರತ ಮಂಟಪದಲ್ಲಿ ಜಿ20 ಶೃಂಗಸಭೆ ನಡೆಯುತ್ತಿದೆ. ಇಂದು ಈ ಸಮ್ಮೇಳನದ ಕೊನೆಯ ದಿನವಾಗಿದ್ದು, ನಿನ್ನೆ ರಾತ್ರಿಯಿಂದ ದೆಹಲಿ-ಎನ್‌ಸಿಆರ್‌ನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಭಾರತ ಮಂಟಪದ ಆವರಣವೂ ಮಳೆನೀರಿನಿಂದ ತುಂಬಿತ್ತು. ಇದನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ವಿಡಿಯೋ ಹಂಚಿಕೊಂಡು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು..“ಪೊಳ್ಳು ಅಭಿವೃದ್ಧಿ ಬಹಿರಂಗವಾಗಿದೆ. ಜಿ-20 ಗಾಗಿ ಸಿದ್ದಪಡಿಸಿದ ಭಾರತ್ ಮಂಟಪಕ್ಕೆ ಹೂಡಿದ 2,700 ಕೋಟಿ ಹಣ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿದೆ” ಎಂದು ಬರೆದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!