ದಿವಂಗತ ನಟ ಅಕ್ಕಿನೇನಿ ನಾಗೇಶ್ವರಾವ್ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಉಪರಾಷ್ಟ್ರಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಆಗಿನ ಟಾಲಿವುಡ್‌ ಸ್ಟಾರ್‌ ನಾಯಕ ಅಕ್ಕಿನೇನಿ ನಾಗೇಶ್ವರರಾವ್‌ ಜನ್ಮದಿನವಾದ್ದರಿಂದ ಅವರ ಪ್ರತಿಮೆಯನ್ನು ಅನ್ನಪೂರ್ಣ ಸ್ಟುಡಿಯೋದಲ್ಲಿ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅನಾವರಣಗೊಳಿಸಿದರು.

20 ಸೆಪ್ಟೆಂಬರ್ 1924 ರಂದು ಕೃಷ್ಣಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಜನಿಸಿದ ಅಕ್ಕಿನೇನಿ ನಾಗೇಶ್ವರ ರಾವ್ (ANR) ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಸ್ಟಾರ್ ಟಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಾಯಕನಟ. ಮುಂದಿನ ವರ್ಷ ಅವರ 100ನೇ ಜನ್ಮದಿನಾಚರಣೆ ಇರುವುದರಿಂದ ಈ ವರ್ಷದಿಂದಲೇ ಅವರ ಜನ್ಮದಿನವಾದ ಇಂದಿನಿಂದ ಶತಮಾನೋತ್ಸವ ಆಚರಣೆ ನಡೆಯಲಿದೆ.

ಇಂದು ಬೆಳಿಗ್ಗೆ ಅಕ್ಕಿನೇನಿ ಕುಟುಂಬದ ಆಶ್ರಯದಲ್ಲಿ ಅನ್ನಪೂರ್ಣ ಸ್ಟುಡಿಯೋದಲ್ಲಿ ಅಕ್ಕಿನೇನಿ ನಾಗೇಶ್ವರರಾವ್‌ ಪ್ರತಿಮೆಯನ್ನು ಪ್ರತಿಷ್ಠಾಪಿಸಿತು.  ಕಾರ್ಯಕ್ರಮದಲ್ಲಿ ಅಕ್ಕಿನೇನಿ ಕುಟುಂಬದ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಅಲ್ಲದೇ ಮಹೇಶ್ ಬಾಬು, ರಾಮ್ ಚರಣ್, ಮಂಚು ವಿಷ್ಣು, ಜಗಪತಿ ಬಾಬು, ನಾಸರ್, ಬ್ರಹ್ಮಾನಂದಂ… ಹೀಗೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ವೇಳೆ ಹಲವು ರಾಜಕೀಯ ಪ್ರಮುಖರು ಉಪಸ್ಥಿತರಿದ್ದರು. ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಆಗಮಿಸಿ ಅಕ್ಕಿನೇನಿ ನಾಗೇಶ್ವರ ರಾವ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!