ಹೊಸದಿಗಂತ ವರದಿಗೆ ಎಚ್ಚೆತ್ತ ಸಿಬ್ಬಂದಿ; ಬಸ್ ನಿಲ್ದಾಣದಲ್ಲಿ ನೀರಿನ‌ ಘಟಕ ದುರಸ್ತಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಇಲ್ಲಿಯ ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್‌ ನಿಲ್ದಾಣದಲ್ಲಿ ಸ್ಥಗಿತವಾಗಿದ್ದ ಕುಡಿಯುವ ನೀರಿನ ಘಟಕಗಳನ್ನು ಸಂಸ್ಥೆಯ ಅಧಿಕಾರಿಗಳು ದುರಸ್ತಿಗೊಳಿಸಿ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗೆ ಅನುಕೂಲ ಮಾಡಿದ್ದಾರೆ.

ಈ ಕುರಿತು ಹೊಸದಿಗಂತ ಪತ್ರಿಕೆಯು ‘ಹೊಸ ಬಸ್ ನಿಲ್ದಾಣದಲ್ಲಿ ನೀರಿಗೆ ಪರದಾಟ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಘಟಕ ದುರಸ್ತಿಗೊಳಿಸಿದ್ದಾರೆ ಮತ್ತು ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಶುದ್ಧ ನೀರಿಗಾಗಿ ಬಾಟಲ್ ಹಿಡಿದು ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು. ಈಗ ಸಮಸ್ಯೆ ಪರಿಹಾರವಾಗಿದ್ದು, ಕ್ಷಣಾರ್ಧದಲ್ಲಿ ನೀರಿನ ಬಾಟಲ್ ತುಂಬುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಾರಿಗೆ ಸಂಪರ್ಕಿಸುವ ಬಸ್ ನಿಲ್ದಾಣವಾಗಿದ್ದು, ಸಾವಿರಾರು ಪ್ರಯಾಣಿಕರು ನಿತ್ಯ ಬಸ್ ನಿಲ್ದಾಣಕ್ಕೆ ಬರುತ್ತಾರೆ. ಆದರೆ ಕೇವಲ ಒಂದೇ ಶುದ್ಧ ನೀರಿನ ಘಟಕವಿದೆ. ಆದ್ದರಿಂದ ಸಾರಿಗೆ ಇಲಾಖೆ ಇನ್ನೂ 2-3 ಘಟಕ ಸ್ಥಾಪಿಸಬೇಕು ಎನ್ನುವುದು ಪ್ರಯಾಣಿಕರ ಆಗ್ರಹವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!