Friday, December 26, 2025

ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ: ಸಚಿವ ಮಹದೇವಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಹೇಳಿದರು.

ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ಘಟನೆ ನಡೆದಿದೆ. ಸಿಲಿಂಡರ್​ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈಗಷ್ಟೇ ಮತ್ತೊಬ್ಬರು ಮೃತಪಟ್ಟ ಸುದ್ದಿ ತಿಳಿದುಬಂದಿದೆ. ಈ ಬಾರಿ ಬಲೂನ್​ ಮಾರಾಟ ಮಾಡುತ್ತಿದ್ದರು. ಹೊರಗಡೆಯಿಂದ ಗ್ಯಾಸ್​ ಸಿಲಿಂಡರ್​ ತಂದು ಅವರು ಬಲೂನ್​ ವ್ಯಾಪಾರ ಮಾಡುತ್ತಿದ್ದರು. ಆ ಸಿಲಿಂಡರ್​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದರು.

ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸಲು ನಾವು ಅವಕಾಶ ಕೊಡುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಅವರೇ ಗ್ಯಾಸ್​ ಸಿಲಿಂಡರ್​ ತಂದಿದ್ದಾರೆ. ಪೌಡರ್​ ಮಿಕ್ಸ್​ ಮಾಡಿ ಅವರೇ ರಾಸಾಯನಿಕ ಮಾಡಿಕೊಳ್ಳುತ್ತಾರೆ. ಅನಿರೀಕ್ಷಿತವಾಗಿ ಸ್ಫೋಟ ನಡೆದಿದೆ. ಇದೊಂದು ಪಾಠ. ಗಾಯಾಳುಗಳ ಚಿಕಿತ್ಸಾ ವೆಚ್ಚಗಳನ್ನು ಸರ್ಕಾರವೇ ನಿರ್ವಹಿಸಲಿದೆ. ಮುಖ್ಯಮಂತ್ರಿಗಳು ಪರಿಹಾರ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ಎನ್‌ಐಎ ಮಾಹಿತಿ ಕೇಳಿರುವುದು ರುಟೀನ್​ ಅಷ್ಟೇ. ಅವರು ತನಿಖೆ ಮಾಡಬಹುದು ಎಂದರು.

error: Content is protected !!