3ದಿನಗಳ ಕಾಲ ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧ

ಹೊಸದಿಗಂತ ವರದಿ ಚಿಕ್ಕಮಗಳೂರು:

ಶ್ರೀರಾಮ ಸೇನೆಯ ದತ್ತಮಾಲ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 4 ಮತ್ತು 6ರವೆಗೆ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಭಾಗದ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಈ ಹಿನ್ನಲೆಯಲ್ಲಿ ನವೆಂಬರ್ ಮೊದಲ ವಾರದ ವೀಕೆಂಡ್‌ನಲ್ಲಿ ಗಿರಿ ಪ್ರದೇಶಕ್ಕೆ ಪ್ರವಾಸದ ಹಮ್ಮಿಕೊಳ್ಳುವ ಯೋಜನೆ ಇದ್ದರೆ ಬದಲಿಸಿಕೊಳ್ಳುವುದು ಸೂಕ್ತ.

ನವೆಂಬರ್ 4ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 6ರ ಬೆಳಗ್ಗೆ 10 ಗಂಟೆಯವರೆಗೆ ಗಿರಿ ಭಾಗಕ್ಕೆ ಪ್ರವಾಸಿಗರು ಬರುವುದಕ್ಕೆ ನಿಷೇಧವಿದೆ.

ಹೊನ್ನಮ್ಮನಹಳ್ಳ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ, ಗಾಳಿಕೆರೆ ಪ್ರದೇಶಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಇದೇ ವೇಳೆ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಆಮಟೆ ಅವರು ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಸಹ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!