Saturday, December 27, 2025

WEATHER | ಮುಂದಿನ ಐದು ದಿನಗಳ ಕಾಲ ರಾಜ್ಯಕ್ಕೆ ಶೀತಗಾಳಿಯ ಎಚ್ಚರಿಕೆ!

ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಚಳಿಯ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ತಾಪಮಾನ ಗಣನೀಯವಾಗಿ ಇಳಿಕೆಯಾಗಲಿದ್ದು, ಶೀತಗಾಳಿ ಬೀಸುವ ಸಾಧ್ಯತೆಯಿದೆ.

ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆಯ ಸಮಯದಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದ್ದು, ಜನಜೀವನದ ಮೇಲೆ ಪರಿಣಾಮ ಬೀರಲಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯಲಿದ್ದು, ಮುಂಜಾನೆ ಮಂಜು ಕವಿದ ವಾತಾವರಣವಿರಲಿದೆ. ಇನ್ನು ಕೊಡಗಿನ ಮಡಿಕೇರಿಯಲ್ಲಿ ಅತಿ ಹೆಚ್ಚು ಚಳಿ ಇರಲಿದ್ದು, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಚಳಿಯಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

error: Content is protected !!