ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ವರದಿ ಕಲಬುರಗಿ:

ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲೆಯ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು 68 ನೆಯ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ತಾಯಿ‌ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಆರತಿ ಬೆಳಗಿ ಪೂಜೆ ಸಲ್ಲಿಸಿದ ಸಚಿವರು ನಾಡಿನ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಂಪ್ರಭು ಪಾಟೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,ಸಿಇಒ ಭಂವರ್ ಸಿಂಗ್ ಮೀನಾ, ಕಮಿಷನರ್ ಆರ್.ಚೇತನ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!