ನೇಪಾಳದಲ್ಲಿ ಪ್ರಬಲ ಭೂಕಂಪ: ನೆರವಿಗೆ ಸಿದ್ಧರಿದ್ದೇವೆ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳದಲ್ಲಿ ನಿನ್ನೆ ಮಧ್ಯರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, 128 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ನೇಪಾಳದ ಕಠ್ಮಂಡು ಹಾಗೂ ಪಶ್ಚಿಮ ರುಕುಂ, ಜಾಜರ್‌ಕೋಟ್ ಸೇರಿದಂತೆ ಹಲವೆಡೆ ಭಾರೀ ಭೂಕಂಪನ ಸಂಭವಿಸಿದ್ದು, 128 ಮಂದಿ ಮೃತಪಟ್ಟಿದ್ದಾರೆ. 140 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ, ನೇಪಾಳಕ್ಕೆ ಎಲ್ಲ ರೀತಿಯ ನೆರವು ನೀಡಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಭೂಕಂಪದಿಂದ ಸಂಭವಿಸಿದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ, ನೇಪಾಳದ ಜನರೊಂದಿಗೆ ನಾವಿದ್ದೇವೆ. ಎಲ್ಲ ಸಹಾಯ ನೀಡಲು ಸಿದ್ಧರಾಗಿದ್ದೇವೆ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದಿದ್ದಾರೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!