March 24, 2026
Tuesday, March 24, 2026
spot_img

ವಲಸಿಗರಾದ್ರೂ ಮುಸ್ಲಿಂ ಕುಟುಂಬಗಳಿಗೆ ಬೇರೆ ಕಡೆ ಜಾಗ ಕೋಡ್ತೀವಿ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಿ ಜಾಗವನ್ನು ಖಾಲಿ ಮಾಡಿಸಿದ್ದಾರೆ.

ಈ ಬಗ್ಗೆ ನಾನು ಜಿಬಿಎ ಕಮಿಷನರ್ ಹಾಗೂ ರಾಜ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೀನಿ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ. ಅವರೆಲ್ಲಾ ವಲಸಿಗರಾದರೂ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಜಾಗ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !