ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಒಬ್ಬನನ್ನು ಮಹಾರಾಷ್ಟ್ರ ಪೊಲೀಸರು (Police) ಬಂಧಿಸಿದ್ದಾರೆ.

ತೆಲಂಗಾಣ (Telangana) ಮೂಲದ ಗಣೇಶ್ ರಮೇಶ್ ವನಪರ್ಡಿ (19) ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ವಿಚಾರಣೆಗಾಗಿ ನ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇ-ಮೇಲ್ ಐಡಿ ಶಾದಾಬ್ ಖಾನ್ ಎಂಬ ವ್ಯಕ್ತಿಗೆ ಸೇರಿದ್ದು, ಬೆಲ್ಜಿಯಂನಿಂದ ಇ-ಮೇಲ್ ಸಂದೇಶಗಳು ಬಂದಿವೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯಿಂದ ಮೊದಲು 20 ಕೋಟಿ ರೂ. ನೀಡುವಂತೆ ಇ-ಮೇಲ್ ಬಂದಿತ್ತು. ಈ ವೇಳೆ ದೂರು ನೀಡಲಾಗಿತ್ತು. ಇದಾದ ಕೆಲವು ದಿನಗಳ ನಂತರ 200 ಹಾಗೂ 400 ಕೋಟಿ ರೂ. ಬೇಡಿಕೆಯ ಇ-ಮೇಲ್‍ಗಳು ಬಂದಿದ್ದವು. ಅಲ್ಲದೇ ಹಣ ನೀಡದೇ ಇದ್ದರೆ ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!