Saturday, December 27, 2025

ಥಿಯೇಟರ್‌ನಲ್ಲಿ ಕಾಲ್ತುಳಿತ ಕೇಸ್‌ನ ಚಾರ್ಜ್‌ಶೀಟ್‌ ಸಲ್ಲಿಕೆ: ಅಲ್ಲು ಅರ್ಜುನ್‌ ಆರೋಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

‘ಪುಷ್ಪ 2’ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಕೋರ್ಟ್​​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಈ ಘಟನೆ ನಡೆದು ಒಂದು ವರ್ಷಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು.

2024ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್​​ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದರಿಂದ ಉಂಟಾದ ಕಾಲ್ತುಳಿತದಲ್ಲಿ ಸಾಕಷ್ಟು ಹಾನಿ ಆಯಿತು.

ಅಲ್ಲು ಅರ್ಜುನ್​ ಬಂದ ಕಾರಣದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ವಾದಿಸಿದರು. ಅವರನ್ನು ಬಂಧಿಸಿ ಒಂದು ದಿನ ಜೈಲಿನಲ್ಲೂ ಇಡಲಾಯಿತು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈಗ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ.

ಚಿಕ್ಕಡಪಲ್ಲಿ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ಚಾರ್ಜ್​​ಶೀಟ್​​ನಲ್ಲಿ ಸಲ್ಲಿಕೆ ಮಾಡಿದ್ದಾರೆ. ಸಂಧ್ಯಾ ಥಿಯೇಟರ್​ ಮ್ಯಾನೇಜ್​​ಮೆಂಟ್​ ಅನ್ನು ಎ1 ಆಗಿ ಪರಿಗಣಿಸಲಾಗಿದೆ. ಘಟನೆಗೆ ಕಾರಣವಾದ ಲೋಪಗಳಿಗೆ ಥಿಯೇಟರ್​​ನವರು ಮುಖ್ಯ ಹೊಣೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

error: Content is protected !!