ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಪರ್ಬಸ್ತರ್ನಲ್ಲಿ ನಡೆದ ರೋಡ್ ಶೋ ವೇಳೆ ಚುನಾವಣಾ ಪ್ರಚಾರದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಅಮಿತ್ ಶಾಗೆ ಯಾವುದೇ ಗಾಯಗಳಾಗಿಲ್ಲ.
ಪ್ರಚಾರದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ತಕ್ಷಣವೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಕಾರು ನಿಲ್ಲಿಸಿ ಸಂಭವಿಸಲಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.
ಇದಾದ ಬಳಿಕ ಶಾ, ರೋಡ್ ಶೋ ಅನ್ನು ಅರ್ಧದಲ್ಲೇ ಸ್ಥಗಿತಗೊಳಿಸಿದರು. ಕೂಡಲೇ, ಭದ್ರತಾ ಸಿಬ್ಬಂದಿ ಶಾ ಅವರನ್ನು ಕಾರಿನಲ್ಲಿ ಕೂರಿಸಿ ಅಲ್ಲಿಂದ ತೆರಳಿದರು.