ಹೊತ್ತಿ ಉರಿದ ಹತ್ತಿ ಗೋದಾಮು, ಇಬ್ಬರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಕಿ ಅನಾಹುತದಿಂದ ಹತ್ತಿ ಗೋದಾಮು ಹೊತ್ತಿ ಉರಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಥಾಣೆ ನಗರ ವ್ಯಾಪ್ತಿಯಲ್ಲಿ ಜರುಗಿದ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.

ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಬೆಂಕಿಯನ್ನು ಹತೋಟಿಗೆ ತಂದರು.

ಹತ್ತಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಥಾಣೆ ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಎರಡು ಮೃತದೇಹಗಳನ್ನು ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆಸ್ತಿ-ಆಸ್ತಿ ನಷ್ಟದ ಬಗ್ಗೆ ಇನ್ನಷ್ಟೇ ವಿವರ ತಿಳಿಯಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!