ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೆ ಸಕ್ರಿಯ ರಾಜಕೀಯದಲ್ಲಿ ಇರ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು. ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು.
ಪಕ್ಷದ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಮಾತನಾಡಿ, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸ್ತೇನೆ ಎಂದು ತಿಳಿಸಿದರು.