ಮಾದರಿ ನೀತಿ ಸಂಹಿತೆ ಉಲ್ಲಂಘನೆ: ನ.17ರಂದು ವಿಚಾರಣೆಗೆ ಹಾಜರಾಗುವಂತೆ ನಟಿ ಜಯಪ್ರದಾಗೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
 

2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ಜಿಲ್ಲಾ ನ್ಯಾಯಾಲಯ ಇದೇ ನ.17ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.

ಜಯಪ್ರದಾ ಅವರಿಗೆ ಜಾಮೀನು ರಹಿತ ವಾರೆಂಟ್‌ ನೀಡಿದ್ದರೂ, ನವೆಂಬರ್‌ 8ರಂದು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ತನಿಖಾಧಿಕಾರಿ ಅಮರನಾಥ್ ತಿವಾರಿ ತಿಳಿಸಿದ್ದಾರೆ.
ಹೀಗಾಗಿ ನ.17 ರಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.

2019ರ ಚುನಾವಣಾ ಪ್ರಚಾರದ ವೇಳೆ ಜಯಪ್ರದಾ ಅವರ ವಿರುದ್ಧ ಸ್ವರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಈವರೆಗೂ ಪ್ರಕರಣ ಇತ್ಯರ್ಥವಾಗದೆ ರಾಮ್‌ಪುರ ಎಂಪಿ-ಎಲ್‌ಎ ನ್ಯಾಯಾಲಯದಲ್ಲಿ ಬಾಕಿ ಉಳಿದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!