April 26, 2026
Sunday, April 26, 2026
spot_img

ಬಾಂಗ್ಲಾದಲ್ಲಿ ಭುಗಿಲೆದ್ದ ಗುಂಪು ಹಿಂಸಾಚಾರ: ಹಿಂದು ಕುಟುಂಬಗಳು ಬದುಕೋದಾದ್ರೂ ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಉಂಟಾಗಿರುವ ರಾಜಕೀಯ ಉದ್ವಿಗ್ನತೆ ದೇಶದ ಸಾಮಾಜಿಕ ಸಾಮರಸ್ಯಕ್ಕೂ ಹೊಡೆತ ನೀಡುತ್ತಿದೆ. ಯುವ ನಾಯಕ ಷರೀಫ್ ಓಸ್ಮಾನ್ ಹಾದಿ ಸಾವಿನ ನಂತರ ಭುಗಿಲೆದ್ದ ಪ್ರತಿಭಟನೆಗಳ ನಡುವೆಯೇ, ಧಾರ್ಮಿಕ ಅಲ್ಪಸಂಖ್ಯಾತರಾಗಿರುವ ಹಿಂದು ಸಮುದಾಯ ಗುರಿಯಾಗುತ್ತಿರುವ ಘಟನೆಗಳು ಹೆಚ್ಚಾಗಿವೆ. ಪಿರೋಜ್‌ಪುರ ಮತ್ತು ಚಟ್ಟೋಗ್ರಾಮ್ ಜಿಲ್ಲೆಗಳಲ್ಲಿ ಹಿಂದು ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿದ್ದು, ಅಲ್ಪಸಂಖ್ಯಾತರ ಭದ್ರತೆ ಬಗ್ಗೆ ಆತಂಕ ಹೆಚ್ಚಿಸಿದೆ.

ಪಿರೋಜ್‌ಪುರ ಜಿಲ್ಲೆಯ ಡುಮ್ರಿಟೋಲಾ ಗ್ರಾಮದಲ್ಲಿ ಅಪರಿಚಿತರು ಹಿಂದು ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದು, ಐದು ಕೊಠಡಿಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಇದೇ ವೇಳೆ, ಕಳೆದ ಐದು ದಿನಗಳಲ್ಲಿ ಚಟ್ಟೋಗ್ರಾಮ್ ಪ್ರದೇಶದಲ್ಲಿ ಕನಿಷ್ಠ ಏಳು ಹಿಂದು ಕುಟುಂಬಗಳ ಮನೆಗಳು ಬೆಂಕಿಗೆ ಆಹುತಿಯಾಗಿವೆ.

ಓಸ್ಮಾನ್ ಹಾದಿ ಸಾವಿನ ನಂತರ ನಡೆದ ವ್ಯಾಪಕ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಅದರ ಪರಿಣಾಮವಾಗಿ ಹಿಂದುಗಳ ಮೇಲೆ ದಾಳಿಗಳು ಹೆಚ್ಚಾಗಿವೆ. ಈ ಬೆಳವಣಿಗೆಗಳು ದೇಶದ ಅಂತರ್ಧರ್ಮೀಯ ಸಾಮರಸ್ಯಕ್ಕೆ ಸವಾಲಾಗಿ ಪರಿಣಮಿಸಿವೆ. ಪೊಲೀಸರು ಹಾಗೂ ಆಡಳಿತ ಯಂತ್ರ ಶಾಂತಿ ಕಾಪಾಡಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !