ಸಿಲ್ಕ್ಯಾರಾ ಸುರಂಗ ಕುಸಿತ: ಸ್ಥಳಕ್ಕೆ ಭೇಟಿಕೊಟ್ಟ ಪ್ರಧಾನಿ ಮೋದಿ ಕಚೇರಿಯ ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ನಿಯೋಗ ಸೋಮವಾರ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ.

ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಇಂದು 16ನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಮಿಕರನ್ನು ರಕ್ಷಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಮಿಶ್ರಾ ಅವರು ಪರಿಶೀಲಿಸಿದರು.

ಸುರಂಗದೊಳಗೆ ಸಿಲುಕಿರುವ ಕಾರ್ಮಿಕರಿಗೆ ಕಳುಹಿಸಿದ ಆಹಾರ ಪದಾರ್ಥಗಳ ಬಗ್ಗೆಯೂ ಪ್ರಧಾನ ಕಾರ್ಯದರ್ಶಿ ವಿಚಾರಿಸಿದರು. ಅಲ್ಲದೆ ಸಿಕ್ಕಿಬಿದ್ದ ಕಾರ್ಮಿಕರು ಮತ್ತು ಅವರ ಕುಟುಂಬಗಳೊಂದಿಗೆ ಮಿಶ್ರಾ ಅವರು ಮಾತನಾಡಿದರು. ಆಗರ್ ಯಂತ್ರದ ಎಲ್ಲಾ ಅವಶೇಷಗಳನ್ನು ತೆಗೆದುಹಾಕಲಾಗಿದೆ ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ತಲುಪಲು ಕೈಯಿಂದಲೇ ಕೊರೆಯುವಿಕೆಯ ಕೆಲಸ ಕೆಲವೇ ಗಂಟೆಗಳಲ್ಲಿ ಪ್ರಾರಂಭವಾಗಲಿದೆ ಎಂದು ಸೂಕ್ಷ್ಮ ಸುರಂಗ ತಜ್ಞ ಕ್ರಿಸ್ ಕೂಪರ್ ಇಂದು ಬೆಳಗ್ಗೆ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!