ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರೆಂಟಿ ಜಾಹೀರಾತು: ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ, ಇದೀಗ ಕಾಂಗ್ರೆಸ್ ಡೋಂಗಿತನ ಕಳಚುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಸಿದ್ದರಾಮಯ್ಯ ಸರ್ಕಾರ ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರೆಂಟಿ ಬಗ್ಗೆ ಜಾಹೀರಾತು ನೀಡಿದ್ದು, ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೊಟೀಸ್ ನೀಡಿದೆ.

ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಸಿಎಂ ಸಿದ್ದು ತೆಲಂಗಾಣದಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದಿದೆ.

ತೆರಿಗೆದಾರರ ಹಣದಿಂದ ಹಾಕಲಾದ ಕಾಂಗ್ರೆಸ್ ಜಾಹೀರಾತುಗಳ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ. ಕಾಂಗ್ರೆಸ್ ಕರ್ನಾಟಕಕ್ಕೆ ದೊಡ್ಡ ಅವಮಾನ ಎಂದು ಹೇಳಿದೆ.

ಕರ್ನಾಟಕವನ್ನು ಕಾಂಗ್ರೆಸ್ ತನ್ನ ಪಾಲಿನ ಎಟಿಎಂ ಮಾಡಿಕೊಂಡಿದೆ, ಕಣ್ಣಿಗೆ ಕಾಣುವಂಥ ಸಾಕ್ಷಿಗಳಿವೆ. ತೆಲಂಗಾಣದ ಪತ್ರಿಕೆಯಲ್ಲಿ ಜಾಹೀರಾತು ಹಾಕಿಸಲು ನಮ್ಮ ರಾಜ್ಯದ ತೆರಿಗೆ ಹಣ ಖರ್ಚು ಮಾಡಿದ್ದಾರೆ. ನೈತಿಕವಾಗಿ ದಿವಾಳಿಯಾಗಿ ಇದೀಗ ಭ್ರಷ್ಟಾಚಾರದಲ್ಲಿ ಹೊಸ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಬರೆಯುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!