ತೆಲಂಗಾಣದಲ್ಲಿ ಸೋಲಿನ ಕಹಿ: ಸಿಎಂ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಜಯಭೇರಿ ಭಾರಿಸಿದೆ.
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ. ಸ್ವಂತ ಕಾರಿನಲ್ಲಿ ಹೈದರಾಬಾದ್ ನ ರಾಜಭವನಕ್ಕೆ ಆಗಮಿಸಿದ ಕೆ.ಚಂದ್ರಶೇಖರ್ ರಾವ್, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!