ಮಿಚಾಂಗ್ ಚಂಡಮಾರುತಕ್ಕೆ ನಲುಗಿದ ತಮಿಳುನಾಡು: ನೆರವಿಗೆ ಧಾವಿಸಿದ ನಟ ಸೂರ್ಯ,ಕಾರ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ಕ್ಷಣ ತಮಿಳು ನಟರಾದ ಸೂರ್ಯ ಮತ್ತು ಕಾರ್ತಿ ಚೆನ್ನೈ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಭಾರೀ ಗಾಳಿ, ಮಳೆಗೆ ಬೃಹತ್ ಮರಗಳು ಧರೆಗುರುಳಿವೆ. ನದಿಗಳು ತುಂಬಿ ಹರಿಯುತ್ತಿರುವುದರಿಂದ ಸಾಕಷ್ಟು ಮಂದಿ ಮನೆ ಕಳೆದುಕೊಂಡಿದ್ದಾರೆ. ರಸ್ತೆಯಲ್ಲಿದ್ದ ಕಾರುಗಳೂ ಕೊಚ್ಚಿ ಹೋಗಿವೆ. ಮೈಚೌಂಗ್ ಸೈಕ್ಲೋನ್ ಹೊಡೆತಕ್ಕೆ ಚೆನ್ನೈ ನಡುಗುತ್ತಿದೆ. ಈ ಭಾರಿ ಮಳೆಗೆ 8 ಮಂದಿ ಸಾವನ್ನಪ್ಪಿರುವಂತಿದೆ. ಹಲವು ಪ್ರಮುಖ ನಗರಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ.

ತಮಿಳಿನ ಸ್ಟಾರ್​​ ನಟರಾದ ಸೂರ್ಯ ಮತ್ತುಕಾರ್ತಿ ಅವರು ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು 10 ಲಕ್ಷಗಳ ಆರಂಭಿಕ ಮೊತ್ತವನ್ನು ಘೋಷಿಸಿದ್ದಾರೆ. ನಟರು ತಮ್ಮ ಅಭಿಮಾನಿಗಳ ಸಂಘಗಳ ಮೂಲಕ ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!