ಹೊಸದಿಗಂತ ವರದಿ, ನಂಜನಗೂಡು:
ಆಕಸ್ಮಿಕವಾಗಿ ಯಂತ್ರ ತಲೆಗೆ ಬಡಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೆöವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ. ಆಶೀಸ್ ಸುಖದಾಸ್ ಪಾಟ್ಲೆ (24) ಮೃತ ದುರ್ದೈವಿ . ಮಹಾರಾಷ್ಟ್ರ ಮೂಲದವನಾದ ಈತ ಕಳೆದ ನಾಲ್ಕು ವರ್ಷಗಳಿಂದ ಮಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ.
ಯಂತ್ರಕ್ಕೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಯಂತ್ರ ಬಡಿದಿದೆ. ಇದರಿಂದ ತೀವ್ರವಾದ ಗಾಯಗೊಂಡು ಯುವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.