ಹೊಸದಿಗಂತ ವರದಿ ಚಿತ್ರದುರ್ಗ:
ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಸೇರಿದ 4.6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಚಿತ್ರದುರ್ಗ ಹೊರವಲಯದ ಕುಂಚಿಗನಾಳ್ ಗ್ರಾಮದ ಬಳಿ ನಡೆದಿದೆ.
ಬೆಳಗಾವಿ ಮೂಲದ ಲತಾ ಎಂಬುವರಿಗೆ ಸೇರಿದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ವಿಆರ್ಎಲ್ ಸಂಸ್ಥೆಗೆ ಸೇರಿದ ಬಸ್ ಕುಂಚಿಗನಾಳ್ ಗ್ರಾಮದ ಬಳಿಯ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಇದೇ ವೇಳೆ ಈ ಘಟನೆ ನಡೆದಿದೆ.
ಬೆಂಗಳೂರಿಂದ ಬೆಳಗಾವಿಗೆ ತೆರಳುತ್ತಿದ್ದ ಲತಾ, ಬಸ್ ನಿಲ್ಲಿಸಿದ್ದರಿಂದ ತನ್ನ ಬ್ಯಾಗನ್ನು ಸೀಟಿನ ಮೇಲೆ ಇಟ್ಟು ಕೆಳಗೆ ಇಳಿದಿದ್ದರು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕಳ್ಳರು ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.