ಬೊಲೆರೋ-ಬಸ್ ಮುಖಾಮುಖಿ ಡಿಕ್ಕಿ: ಒರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಬಸ್ – ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಗಂಬೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಯಲ್ಲಿ ನಡೆದಿದೆ.

ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೋ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದಿದೆ .

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ 48 ಸ್ಥಳದಲ್ಲೇ ಮೃತಪಟ್ಟರೆ, ಮಂಜು 45 , ಸುಜಯ 28 ರವರ ಸ್ಥಿತಿ ಗಂಭೀರ ವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ಹಿಂದಿರುವ ಸಂದರ್ಭ ಘಟನೆ ಸಂಭವಿಸಿದೆ.

ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!