ಹೊಸದಿಗಂತ ಡಿಜಿಟಲ್ ಡೆಸ್ಕ್:
2019 ರಲ್ಲಿ ಕೇಂದ್ರ ಸರ್ಕಾರ 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು.
ಸರ್ಕಾರದ ಈ ನಿರ್ಧಾರದ ವಿರುದ್ಧ ಕೋರ್ಟ್ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಹಲವು ಸುತ್ತಿನ ವಾದ ವಿವಾದದ ನಂತರ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಈ ಕಾರಣದಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ತೀವ್ರ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ನಾವು ಯಾವ ಭರವಸೆಯನ್ನು ಇಟ್ಟುಕೊಂಡು ಅಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದೆವೋ ಅದೇ ಭರವಸೆ ಇಂದು ಕೂಡ ಇದೆ. ನಮಗೆ ನ್ಯಾಯ ಸಿಗುತ್ತದೆ ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
#WATCH | J&K: Security heightened in Srinagar ahead of the Supreme Court’s verdict on the batch of petitions challenging the abrogation of Article 370 in Jammu and Kashmir. pic.twitter.com/yfMNBwAK8v
— ANI (@ANI) December 11, 2023