ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಲರ್ಟ್ ಆಗಿದ್ದು, ಎಲ್ಲೆಡೆ ಬಿಗಿ ತಪಾಸಣೆ ನಡೆಸಲಾಗುತ್ತಿದೆ.
ಭದ್ರತಾ ಲೋಪ ಘಟನೆ ಬಳಿಕ ಹೊಸ ಕಟ್ಟಡವನ್ನು ಪ್ರವೇಶಿಸಲು ತಮ್ಮ ‘ಸ್ಮಾರ್ಟ್ ಕಾರ್ಡ್’ಗಳನ್ನು ಸಿದ್ಧಪಡಿಸುವಂತೆ ಲೋಕಸಭೆಯ ಸೆಕ್ರೆಟರಿಯೇಟ್ ಬುಧವಾರ ಸಂಸದರಿಗೆ ಸೂಚಿಸಿದ್ದಾರೆ.
ಕಟ್ಟಡದ ಗೇಟ್ಗಳು, ಲೋಕಸಭೆ ಮತ್ತು ರಾಜ್ಯಸಭೆಯ ಲಾಬಿಗಳು ಮತ್ತು ಇತರ ಕೆಲವು ಸ್ಥಳಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಯ ಸಹಾಯದಿಂದ ಸಂಸತ್ ಭವನಕ್ಕೆ ಪ್ರವೇಶವನ್ನು ಸುಗಮಗೊಳಿಸಲಾಗುತ್ತಿದೆ.
ಹಲವಾರು ಸದಸ್ಯರು ಸ್ಮಾರ್ಟ್ ಕಾರ್ಡ್ಗಳನ್ನು ಹೊಂದಿದ್ದರೆ, ಸಂದರ್ಶಕರ ನಿರ್ವಹಣಾ ವ್ಯವಸ್ಥೆಗೆ ನೋಂದಾಯಿಸದಿರುವವರು ಹಾಗೆ ಮಾಡಬೇಕು ಎಂದು ಸಚಿವಾಲಯ ತಿಳಿಸಿದೆ.
ನಿನ್ನೆಯ ಘಟನೆ ಬಳಿಕ ದೆಹಲಿಯ ಸಂಸತ್ತು ಭವನ ಹೊರಗೆ ಇಂದು ಭಾರೀ ಭದ್ರತೆ ಏರ್ಪಡಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ಆವರಣ ಪ್ರವೇಶಿಸುವ ಪ್ರತಿ ವಾಹನಗಳನ್ನು ತಪಾಸಣೆ ಮಾಡಿ ಒಳಗೆ ಕಳುಹಿಸಲಾಗುತ್ತಿದೆ.