ಗೋಕರ್ಣ, ಮುರುಡೇಶ್ವರದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲ ಗೆಹ್ಲೋಟ್

ಹೊಸದಿಗಂತ ವರದಿ, ಕಾರವಾರ:

ಇತಿಹಾಸ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿ ದರ್ಶನ ಪಡೆದರು.

ಗೋಕರ್ಣ ಕ್ಷೇತ್ರದಲ್ಲಿ ಮಹಾಬಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರಿಗೆ ಪೂರ್ಣ ಕುಂಭ ಸ್ವಾಗತ ಕೋರಲಾಯಿತು.
ರಾಜ್ಯಪಾಲರಿಂದ ದೇವರಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ನವಧಾನ್ಯ ಅಭಿಷೇಕ, ಮಹಾಮೃತ್ಯುಂಜಯ ಅಭಿಷೇಕ, ಕೈಲಾಸ ಮಹಾಪೂಜೆ, ಶತರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿಸಿದರು.

ವಿಶೇಷ ಪೂಜೆಯ ಬಳಿಕ ಕ್ಷೇತ್ರದ ಅರ್ಚಕರಿಂದ ರಾಜ್ಯಪಾಲರಿಗೆ ರುದ್ರಾಕ್ಷಿ ಮಾಲೆ, ಶಾಲು ಹಾಕಿ, ಹಣ್ಣುಗಳನ್ನು ನೀಡಿ ಸನ್ಮಾನಿಸಲಾಯಿತು. ಗೋಕರ್ಣ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮುರುಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!