ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ನಲ್ಲಿ ಆಡಲಿದ್ದಾರ? ಇಲ್ಲವಾ? ಎಂಬ ಚರ್ಚೆಗಳು ಕಳೆದ ಕೆಲವು ದಿನಗಳಿಂದ ಶುರುವಾಗಿದೆ.
ಅಚ್ಚರಿ ಎಂಬಂತೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಿ, ರೋಹಿತ್ ಅವರನ್ನು ಈ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದು ರೋಹಿತ್ ಶರ್ಮ ಅವರ ಟಿ20 ಕ್ರಿಕೆಟ್ ಬಾಳ್ವೆ ಬಹುತೇಕ ಕೊನೆಗೊಂಡಿರುವ ಸುಳಿವೊಂದನ್ನು ನೀಡಿದೆ.
ಕೆಲ ದಿನಗಳ ಹಿಂದೆ ರೋಹಿತ್ ಅವರ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ(Jay Shah) ಹೇಳಿಕೆಯೊಂದನ್ನು ನೀಡಿದ್ದರು. ‘ಟಿ20 ವಿಶ್ವಕಪ್ನಲ್ಲಿ ರೋಹಿತ್ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ’ ಎಂದು ಹೇಳಿದ್ದರು.
ಹೀಗಾಗಿ ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ನಲ್ಲಿ ಆಡಲಿದ್ದಾರ? ಇಲ್ಲವಾ? ಅನುಮಾನಗಳು ಶುರುವಾಗಿದೆ.
ಟಿ20 ವಿಶ್ವಕಪ್ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆತಿಥ್ಯದಲ್ಲಿ ನಡೆಯಲಿದೆ. ಸದ್ಯದ ಪ್ರಕಾರ ಈ ಟೂರ್ನಿ ಜೂನ್ನಲ್ಲಿ ನಡೆಯುವ ಸಾಧ್ಯತೆ ಇದೆ.
ಇನ್ನೊಂದು ಮೂಲಗಳ ಪ್ರಕಾರ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಿಂದ ಈಗಾಗಲೇ ದೂರ ಉಳಿಯಲು ನಿರ್ಧರಿಸಿದ್ದು ಕೇವಲ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ಗೆ ಮಾತ್ರ ಗಮನ ನೀಡಲು ನಿರ್ಧರಿಸಿರುವುದಾಗಿ ವರದಿಯೊಂದು ತಿಳಿಸಿದೆ. ಏಕದಿನ ವಿಶ್ವಕಪ್ ಸೋಲಿನ ಬಳಿಕವೇ ಉಭಯ ಆಟಗಾರರು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಉಭಯ ಆಟಗಾರರು ಈ ವಿಚಾರವನ್ನು ಅಧಿಕೃತವಾಗಿ ಎಲ್ಲಿಯೂ ಇದುವರೆಗೆ ಹೇಳಿಲ್ಲ.