ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿರುವ ಸಂಸದ-ಶಾಸಕ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಟೀಕೆಗಳನ್ನು ಮಾಡಿದ ಆರೋಪದ ಪ್ರಕರಣದಲ್ಲಿ ರಾಹುಲ್ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಶನಿವಾರ ಹಾಜರಾಗುವಂತೆ ನ್ಯಾಯಾಲಯ ಈ ಹಿಂದೆ ಗಾಂಧಿಗೆ ಸೂಚಿಸಿತ್ತು. ಆದರೆ, ಅವರು ಹಾಜರಾಗಲು ವಿಫಲರಾಗಿದ್ದರು. ಇದೀಗ ಡಿಸೆಂಬರ್ 16 ರಂದು ಗಾಂಧಿಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಆಗಸ್ಟ್ 4, 2018 ರಂದು ಭಾರತೀಯ ಜನತಾ ಪಕ್ಷದ ನಾಯಕ ವಿಜಯ್ ಮಿಶ್ರಾ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದಾಖಲಿಸಿದ ಮೊಕದ್ದಮೆಯಿಂದ ಉದ್ಭವಿಸಿದೆ. ಸುಲ್ತಾನ್ಪುರದ ಸಂಸದ-ಶಾಸಕ ನ್ಯಾಯಾಲಯವು ಡಿಸೆಂಬರ್ 16 ರಂದು ಈ ಪ್ರಕರಣದಲ್ಲಿ ಗಾಂಧಿಗೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಲಿಲ್ಲ ಎಂದು ಮಿಶ್ರಾ ಪರ ವಕೀಲ ಸಂತೋಷ್ ಪಾಂಡೆ ಹೇಳಿದರು.
ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುವ ಬಿಜೆಪಿಯು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಕ್ಷದ ಅಧ್ಯಕ್ಷರನ್ನು ಹೊಂದಿದೆ ಎಂಬ ಗಾಂಧಿಯವರ ಹೇಳಿಕೆಯನ್ನು ದೂರುದಾರರು ಉಲ್ಲೇಖಿಸಿದ್ದರು. ಅವರು ಈ ಹೇಳಿಕೆ ನೀಡಿದಾಗ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು.ಪಾಂಡೆ ಅವರು ನವೆಂಬರ್ 18 ರಂದು, ನ್ಯಾಯಾಧೀಶ ಯೋಗೇಶ್ ಯಾದವ್ ವಾದಗಳ ನಂತರ ತೀರ್ಪನ್ನು ಕಾಯ್ದಿರಿಸಿದರು. ಮತ್ತು ನವೆಂಬರ್ 27 ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದರು. ಮತ್ತು ಡಿಸೆಂಬರ್ 16 ರಂದು ಗಾಂಧಿಗೆ ಹಾಜರಾಗುವಂತೆ ಸಮನ್ಸ್ ನೀಡಿದರು.