ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆ ಭೇಟಿಗೆ ಹೈಕೋರ್ಟ್ ನಿರ್ಬಂಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕ್ಕೊಳಗಾದ ಸಂತ್ರಸ್ತೆಗೆ ಚಿಕಿತ್ಸೆ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

ಮುಖ್ಯ ನ್ಯಾಯಮೂರ್ತಿ ಕಚೇರಿಯಲ್ಲಿ ಇಂದು ಪಿಐಎಲ್ ವಿಚಾರಣೆ ನಡೆಸಲಾಗಿದೆ.ಸಾಮಾನ್ಯವಾಗಿ ವ್ಯಕ್ತಿಗಳ ಸ್ವಾತಂತ್ರ್ಯ ನಿರ್ಬಂಧಿಸುವುದಿಲ್ಲ. ನೊಂದಿರುವ ಸಂತ್ರಸ್ತ ಮಹಿಳೆಗೆ ವೈದ್ಯರು ಚಿಕಿತ್ಸೆ ಒದಗಿಸುತ್ತಿದ್ದಾರೆ. ಹೀಗಾಗಿ ಸಂತ್ರಸ್ತೆಯ ಭೇಟಿಗೆ ಷರತ್ತುಬದ್ಧ ನಿರ್ಬಂಧ ವಿಧಿಸುತ್ತಿದ್ದೇವೆ.

ಹೈಕೋರ್ಟ್, ವೈದ್ಯಾಧಿಕಾರಿ ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆಯನ್ನು ಭೇಟಿ ನೀಡುವಂತಿಲ್ಲ. ವ್ಯಕ್ತಿ, ಸಂಘಟನೆ, ರಾಜಕೀಯ ಪಕ್ಷಗಳ ಭೇಟಿಗೆ ನಿರ್ಬಂಧ ವಿಧಿಸಿದೆ. ಆಯೋಗಗಳು, ತನಿಖಾ ಸಂಸ್ಥೆಗಳು ಸಂತ್ರಸ್ತೆ ಭೇಟಿ ಮಾಡಬಹುದು. ಸಂತ್ರಸ್ತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!