ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದ್ದು,. ಭಾನುವಾರ ಜೋಹಾನ್ಸ್ಬರ್ಗ್ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಕೆಎಲ್ ರಾಹುಲ್ ನಾಯಕತ್ವದಲ್ಲಿ ಪಂದ್ಯ ನಡೆಯಲಿದೆ.
ಟಿ20 ಸರಣಿಯು 1-1 ರಿಂದ ಡ್ರಾದಲ್ಲಿ ಕೊನೆಗೊಂಡಿತು. ಆದರೆ ಈಗ ಉಭಯ ತಂಡಗಳೂ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿವೆ. ಅದರಂತೆ ಬಲಿಷ್ಠ ಪಡೆಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ.
ಈ ಏಕದಿನ ಸರಣಿ ಆರಂಭಕ್ಕೂ ಮುನ್ನ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ , ಬಹಳ ದಿನಗಳಿಂದ ತಂಡದಲ್ಲಿ ಆಡುವ ಕನಸು ಕಾಣುತ್ತಿದ್ದ ರಿಂಕು ಸಿಂಗ್ ಮತ್ತು ಸಂಜು ಸ್ಯಾಮ್ಸನ್ಗೆ ಏಕದಿನ ತಂಡದಲ್ಲಿ ಅವಕಾಶ ನೀಡುವ ಬಗ್ಗೆ ಮಾತನಾಡಿದ್ದಾರೆ.
ಸಂಜು ಸ್ಯಾಮ್ಸನ್ ಮತ್ತು ರಿಂಕು ಸಿಂಗ್ ಇಬ್ಬರಿಗೂ ಅವಕಾಶ ಸಿಗಲಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ. ಸಂಜು ಸ್ಯಾಮ್ಸನ್ ಏಕದಿನ ಸರಣಿಯಲ್ಲಿ ಆಡಲಿದ್ದು, 5 ಅಥವಾ 6ನೇ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.
ಮತ್ತೊಂದೆಡೆ ರಿಂಕು ಸಿಂಗ್ಗೆ ಏಕದಿನ ಮಾದರಿಯಲ್ಲಿ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ. ಟಿ20 ಕ್ರಿಕೆಟ್ನಲ್ಲಿ ರಿಂಕು ಸಿಂಗ್ ಅದ್ಭುತ ಪ್ರದರ್ಶನ ನೀಡಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಏಕದಿನ ಮಾದರಿಯಲ್ಲಿಯೂ ಅವಕಾಶ ಪಡೆಯುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.
ಇನ್ನು ತಂಡದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ಕೆಎಲ್ ರಾಹುಲ್, ಏಕದಿನ ಸರಣಿಯಲ್ಲೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇದಲ್ಲದೇ ವಿಕೆಟ್ ಕೀಪಿಂಗ್ ಪಾತ್ರವನ್ನೂ ನಿರ್ವಹಿಸಲಿದ್ದಾರೆ. ಸಂಜು ಸ್ಯಾಮ್ಸನ್ ಉಪಸ್ಥಿತಿಯ ಹೊರತಾಗಿಯೂ ರಾಹುಲ್ ಈ ಜವಾಬ್ದಾರಿಯನ್ನು ಸ್ವತಃ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.