ತಮಿಳುನಾಡಿನಲ್ಲಿ ವರುಣನ ಅಬ್ಬರ: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಮತ್ತೊಮ್ಮೆ ವರುಣ ಅಬ್ಬರಿಸುತ್ತಿದ್ದು, 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾನಿ ಸಂಭವಿಸಿದೆ.

ಮಿಚಾಂಗ್ ಚಂಡಮಾರುತವು ಚೆನ್ನೈ ಮತ್ತು ಉತ್ತರ ತಮಿಳುನಾಡಿನಲ್ಲಿ ಭಾರಿ ಹಾನಿಯನ್ನುಂಟು ಮಾಡಿದ ಹದಿನೈದು ದಿನಗಳ ನಂತರ ಇಲ್ಲಿ ಮಳೆ ಮತ್ತೊಮ್ಮೆ ಅನಾಹುತ ಸೃಷ್ಟಿದೆ.

ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳು. ಅಲ್ಲಿನ ರಸ್ತೆಗಳು, ಸೇತುವೆಗಳು, ಮನೆಗಳು ಮತ್ತು ಭತ್ತದ ಗದ್ದೆಗಳು ಮುಳುಗಿವೆ. ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಮಳೆಯ ಕಾರಣದಿಂದ ತಿರುನಲ್ವೇಲಿ, ಕನ್ಯಾಕುಮಾರಿ, ಕೆಂಕಾಶಿ ಮತ್ತು ತೂತುಕುಡಿ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಲವು ಪ್ರದೇಶಗಳಿಗೆ ವಿದ್ಯುತ್‌ ಪೂರೂಕೆ ಸ್ಥಗಿತಗೊಂಡಿದೆ. ಅಲ್ಲದೆ ಮೊಬೈಲ್‌ ಫೋನ್‌ ಸಂಪರ್ಕಕ್ಕೂ ತೊಂದರೆ ಉಂಟಾಗಿದೆ. ದಕ್ಷಿಣ ತಮಿಳುನಾಡು ಮತ್ತು ಮನ್ನಾರ್‌ ಗಲ್ಫ್‌, ಕೊಮೊರಿನ್‌ ಪ್ರದೇಶ, ಲಕ್ಷದ್ವೀಪ ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪರಿಹಾರ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ದೆಹಲಿಗೆ ತೆರಳಿದ್ದಾರೆ. ಏತನ್ಮಧ್ಯೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳನ್ನು ರಾಜ್ಯಕ್ಕೆ ಕಳುಹಿಸಲಾಗಿದೆ. ಗರ್ಭಿಣಿ ಮತ್ತು 1.5 ವರ್ಷದ ಮಗು ಸೇರಿದಂತೆ ನಾಲ್ವರು ಪ್ರಯಾಣಿಕರನ್ನು ಸುರಕ್ಷಿತವಾಗಿ ಮಧುರೈಗೆ ಕರೆದೊಯ್ಯುವ ವಿಡಿಯೊವನ್ನು ರಕ್ಷಣಾ ಸಚಿವಾಲಯ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!