ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯ ನೀತಿ ಹಗರಣ ಸಂಬಂಧ ಎಎಪಿ ನಾಯಕ ಸಂಜಯ್ ಸಿಂಗ್ (sanjay singh) ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಇಂದು ವಜಾಗೊಳಿಸಿದೆ.
ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ರಾಜ್ಯಸಭಾ ಸಂಸದ ಸಿಂಗ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು.
ಡಿಸೆಂಬರ್ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇನ್ನು ಈ ಪ್ರಕರಣದ ವಿಚಾರಣೆ ವೇಳೆ ಸಂಜಯ್ ಸಿಂಗ್ ಅವರ ವಕೀಲರು ವಾದ ಮಂಡಿಸುವ ವೇಳೆ ಸಂಜಯ್ ಸಿಂಗ್ ಅವರಿಗೆ ಲಂಚ ನೀಡುವ ಕುರಿತು ಆರೋಪಿ ದಿನೇಶ್ ಅರೋರಾ ಮತ್ತು ಇತರ ಸಾಕ್ಷಿಗಳ ಹೇಳಿಕೆಗಳಲ್ಲಿ ವಿರೋಧಾಭಾಸಗಳಿವೆ ಎಂದು ಹೇಳಿದರು.
ಇನ್ನು ಸಂಜಯ್ ಸಿಂಗ್ ಅವರ ಜಾಮೀನಿ ಅರ್ಜಿಯನ್ನು ಇಡಿ ವಿರೋಧಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿಯಾಗಬಹುದು. ಸಾಕ್ಷಿಗಳನ್ನು ನಾಶ ಮಾಡಬಹುದು ಎಂದು ಇಡಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.