ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.
ವೈಎಸ್ ಶರ್ಮಿಳಾ ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಮತ್ತು ಅಧ್ಯಕ್ಷರೂ ಆಗಿದ್ದಾರೆ. ಆದ್ರೆ ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪ್ರಾಬಲ್ಯವನ್ನು ಕೊನೆಗೊಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ವೈಎಸ್ ಶರ್ಮಿಳಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಎಲ್ಲಾ ನಾಯಕರೊಂದಿಗೆ ಸಭೆ ಕರೆದಿದ್ದು, ಇದರಲ್ಲಿ ಪಕ್ಷ ವಿಲೀನ ಮತ್ತು ಮುಂದಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ತೆಲಂಗಾಣದಲ್ಲಿ ಇತ್ತೀಚೆಗಷ್ಟೇ ಮುಕ್ತಾಯವಾದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ವೈಎಸ್ ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಘೋಷಣೆ ಮಾಡಿದ್ದರು.
ಕೆಸಿಆರ್ ಅವರು ತಮ್ಮ 9 ವರ್ಷಗಳ ಅಧಿಕಾರಾವಧಿಯಲ್ಲಿ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಮತ್ತು ಕೆಸಿಆರ್ ಅಧಿಕಾರಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂಬ ಏಕೈಕ ಕಾರಣಕ್ಕಾಗಿ. ವೈಎಸ್ಆರ್ ಅವರ ಮಗಳಾಗಿ ನಾನು ಕಾಂಗ್ರೆಸ್ ಅಪಾಯವನ್ನು ಎದುರಿಸಲು ಕಾಂಗ್ರೆಸ್ಗೆ ಬೆಂಬಲ ನೀಡುತ್ತೇನೆ. 55ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾನು ಕಾಂಗ್ರೆಸ್ ಮತಬ್ಯಾಂಕ್ ಮೇಲೆ ಪರಿಣಾಮ ಬೀರಲಿದ್ದೇನೆ ಎಂದು ಶರ್ಮಿಳಾ ಹೇಳಿದ್ದಾರೆ.