ಹೊಸದಿಗಂತ ವರದಿ ಚಿತ್ರದುರ್ಗ:
ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ನಗರದ ನೆಹರು ನಗರದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಪತಿಯ ಅನುಮಾನಕ್ಕೆ ಬಲಿಯಾದ ಮಹಿಳೆಯನ್ನು ರೇಣುಕಮ್ಮ (40) ಎಂದು ಗುರುತಿಸಲಾಗಿದೆ. ಈಕೆಯ ಪತಿ ಮಂಜುನಾಥ ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನ ಹೊಂದಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಪತ್ನಿ ರೇಣುಕಮ್ಮಳ ಕತ್ತೊಕೊಯ್ದು ಕೊಲೆ ಮಾಡಿ ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತಿಯ ಪತ್ತೆಗೆ ಬಲೆ ಬೀಸಿದ್ದಾರೆ.