February 25, 2026
Wednesday, February 25, 2026
spot_img

WEATHER | ಮಲೆನಾಡು, ಮೈಸೂರು ಭಾಗದಲ್ಲಿ ಇಂದಿನಿಂದಲೇ ಜಿಟಿಜಿಟಿ ಮಳೆ ಆರಂಭ!

ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ, ಇಂದು ಕೂಡ ಮಲೆನಾಡು ಮತ್ತು ದಕ್ಷಿಣದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ವಿಶೇಷವಾಗಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆಯ ಸಿಂಚನವಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನಗರದಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿರುವುದರಿಂದ ಮತ್ತು ತಾಪಮಾನದಲ್ಲಿ ಚೇತರಿಕೆ ಕಾಣದ ಕಾರಣ, ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಬೆಚ್ಚಗಿನ ಉಡುಪುಗಳನ್ನು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ದಕ್ಷಿಣ ಭಾಗದಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ ಸೇರಿದಂತೆ ಹಲವೆಡೆ ಒಣಹವೆ ಮುಂದುವರಿಯಲಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಹವಾಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !