ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿದ್ದನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ. ಬಿಜೆಪಿಗೆ ಜೆಡಿಎಸ್ ನಾಯಕರು ಸಾಥ್ ನೀಡಿದ್ದು, ಪಾದಯಾತ್ರೆಯಲ್ಲಿ ರಾಜಕೀಯ ನಾಯಕರು ಕಾಣಿಸಿಕೊಳ್ಳಲಿದ್ದಾರೆ.
ಪಾದಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಸಿ.ಟಿ. ರವಿ ಹಾಗೂ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಕೆಸಿ ನಾರಾಯಣಗೌಡ, ಸಿಎಸ್ ಪುಟ್ಟರಾಜು, ಮಾಜಿ ಶಾಸಕರಾದ ಪ್ರೀತಂ ಗೌಡ, ಸುರೇಶ್ ಗೌಡ, ಡಿಸಿ ತಮ್ಮಣ್ಣ ಭಾಗಿಯಾಗಲಿದ್ದಾರೆ. ಒಟ್ಟಾರೆ 15 ಕಿ,ಮೀ ಪಾದಯಾತ್ರೆ ಇದಾಗಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ.
ಪಾದಯಾತ್ರೆ ವೇಳೆ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಒಟ್ಟಾರೆ 400ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ.