ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ₹11 ಕೋಟಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಟ್ರಸ್ಟ್ನ ಉಸ್ತುವಾರಿ ಪ್ರಕಾಶ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಕಳೆದ 11 ದಿನಗಳಲ್ಲಿ ಸುಮಾರು ₹8 ಕೋಟಿ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ. ಚೆಕ್ ಮತ್ತು ಆನ್ಲೈನ್ ಮೂಲಕ ಸುಮಾರು ₹3.50 ಕೋಟಿ ಸಂಗ್ರಹವಾಗಿದೆ. ಅಲ್ಲದೇ 10 ಗಣಕೀಕೃತ ಕೌಂಟರ್ಗಳಲ್ಲಿಯೂ ಜನರು ದೇಣಿಗೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಕಾಣಿಕೆ ಹುಂಡಿಗಳಲ್ಲಿನ ಹಣವನ್ನು ಎಣಿಸುತ್ತಾರೆ. ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಮಾಡಲಾಗುತ್ತದೆ ಎಂದು ಗುಪ್ತಾ ತಿಳಿಸಿದ್ದಾರೆ.