ಗಡಿ ಉಲ್ಲಂಘನೆ: ಶ್ರೀಲಂಕಾ ನೌಕಾಪಡೆಯಿಂದ ಮತ್ತೆ 23 ಭಾರತೀಯ ಮೀನುಗಾರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ತಮಿಳುನಾಡಿನ (Tamil Nadu) ರಾಮೇಶ್ವರಂನ (Rameswaram) ಕರಾವಳಿ ಭಾಗದಲ್ಲಿ ಗಡಿ ಉಲ್ಲಂಘಿಸಿದ 23 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ (Sri Lankan Navy) ಬಂಧಿಸಿದೆ.

ಮೀನುಗಾರರು ಪಾಲ್ಕ್‍ಬೇ ಸಮುದ್ರ ಪ್ರದೇಶದ ಡೆಲ್ಫ್ಟ್ ದ್ವೀಪದ ಬಳಿ ಮೀನುಗಾರಿಕೆ ನಡೆಸುತ್ತಿದ್ದರು. ಈ ವೇಳೆ ಶ್ರೀಲಂಕಾ ನೌಕಾಪಡೆ ಮೀನುಗಾರರನ್ನು ಬಂಧಿಸಿದೆ. ಬಳಿಕ ಜಾಫ್ನಾದ ಮೈಲಾಟಿ ನೇವಲ್ ಕ್ಯಾಂಪ್‍ಗೆ ತನಿಖೆಗಾಗಿ ಕರೆದೊಯ್ದಿದೆ.

ಕಳೆದ ತಿಂಗಳು ಶ್ರೀಲಂಕಾ ನೌಕಾಪಡೆ 18 ಭಾರತೀಯ ಮೀನುಗಾರರನ್ನು ಬಂಧಿಸಿತ್ತು. ಲಂಕಾದ ಕರಾವಳಿ ಪ್ರದೇಶದಲ್ಲಿ ಎರಡು ಭಾರತೀಯ ಮೀನುಗಾರಿಕಾ ಬೋಟ್‍ಗಳನ್ನು ವಶಪಡಿಸಿಕೊಂಡಿತ್ತು.
ಕಳೆದ ಜುಲೈನಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಈ ವಿಷಯದ ಬಗ್ಗೆ ಚರ್ಚಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!