ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಮತ್ತು ಇತರ ಪ್ರಮುಖ ಆಮ್ ಆದ್ಮಿ ನಾಯಕರ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ 10 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ನೀರು ಸರಬರಾಜು ಮಂಡಳಿ ಹಗರಣದ ತನಿಖೆಯ ಭಾಗವಾಗಿ ಶೋಧ ನಡೆಸಲಾಗಿದೆ.
ತನಿಖೆಯ ಭಾಗವಾಗಿ, ಕೇಂದ್ರೀಯ ತನಿಖಾ ದಳವು ಮಾಜಿ ದೆಹಲಿ ಜಲ ಮಂಡಳಿ (ಡಿಜೆಬಿ) ಸದಸ್ಯ ಶಲಭ್ ಕುಮಾರ್ ಮತ್ತು ಪಕ್ಷದ ರಾಜ್ಯಸಭಾ ಸದಸ್ಯರೂ ಆಗಿರುವ ಎಎಪಿ ಖಜಾಂಚಿ ಎನ್.ಡಿ.ಗುಪ್ತಾ ಅವರ ನಿವಾಸದಲ್ಲಿಯೂ ಶೋಧ ನಡೆಸಿದೆ.