ಹೊಸದಿಗಂತ ಡಿಜಿಟಲ್ ಡೆಸ್ಕ್:
5 ವರ್ಷದ ಕಂದಮ್ಮನನ್ನು ತಾಯಿಯೇ ಕೊಲೆ ಮಾಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡದ ಕಮಲಾಪುರದಲ್ಲಿ ಈ ಘಟನೆ ನಡೆದಿದೆ.
ಸಹನಾ ಹಿರೇಮಠ (5) ಕೊಲೆಯಾದ ಬಾಲಕಿ. ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಮನೆಯಲ್ಲೇ ಬಾಲಕಿಯ ಮೃತ ದೇಹ ಪತ್ತೆಯಾಗಿದ್ದು, ತಾಯಿಯೇ ಕೊಲೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.
ತಾಯಿ ಜ್ಯೋತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ಕಾರಣಕ್ಕಾಗಿ ಜ್ಯೋತಿ ಈ ಕೃತ್ಯ ಮಾಡಿರಬಹುದು ಎಂಬ ಅನುಮಾನ ಸೃಷ್ಟಿಯಾಗಿದೆ. ಸದ್ಯ ಈ ಘಟನೆ ಕುರಿತು ಪ್ರಕರಣ ದಾಖಲು ಮಾಡಲಾಗಿದೆ.