ಜೈನ ಮುನಿ ಆಚಾರ್ಯ ವಿದ್ಯಾಸಾಗರ್ ಮಹಾರಾಜ್‌ ಪ್ರಾಣತ್ಯಾಗ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಬೆಳಗಾವಿಯಲ್ಲಿ ಜನಿಸಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದ್ದ ಜೈನ ಸಂತ ಆಚಾರ್ಯ ವಿದ್ಯಾಸಾಗರ ಮಹಾರಾಜರು (77) ಸಲ್ಲೇಖನ ವ್ರತ ಆಚರಿಸಿ ಪ್ರಾಣ ತ್ಯಾಗ ಮಾಡಿದ್ದಾರೆ.

ಭಾನುವಾರ 2:30 ರ ಸುಮಾರಿಗೆ ಛತ್ತೀಸ್‌ಗಢದ ಡೊಂಗರಗಢದಲ್ಲಿರುವ ಚಂದ್ರಗಿರಿಯ ತೀರ್ಥದಲ್ಲಿ ಕೊನೆಯುಸಿರೆಳೆದರು. ಜೈನಮುನಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಆಚಾರ್ಯ ವಿದ್ಯಾಸಾಗರ ಮಹಾರಾಜರು ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿತು. ಕಳೆದ ಮೂರು ದಿನಗಳಿಂದ ಅವರು ಯಾವುದೇ ಆಹಾರ, ನೀರು ಸೇವಿಸಿಲ್ಲ. ಕೊನೆಗೆ ಭಾನುವಾರ ಬೆಳಗ್ಗೆ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!