ನಡುರಸ್ತೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು, ಬಿಎಂಟಿಸಿ ಚಾಲಕನೊಬ್ಬ ಹೆದ್ದಾರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಹೊಸಕೋಟೆ ಟೋಲ್ ಪ್ಲಾಜಾ ಬಳಿಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನಿಸಿದಂತ ವೇಳೆಯಲ್ಲಿ ಆತನನ್ನು ಸ್ಥಳೀಯರು, ಬಸ್ ನಲ್ಲಿದ್ದಂತ ಪ್ರಯಾಣಿಕರು ರಕ್ಷಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಚಾಲಕನನ್ನು ಮನವೊಲಿಸಿ, ಅಲ್ಲಿಂದ ಬಸ್ಸನ್ನು ಕಳುಹಿಸಿದ್ದಾರೆ.
ಈ ಇಡೀ ಘಟನೆ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿಯಲ್ಲಿ ನಡೆದಿದ್ದು, ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣಕ್ಕೂ ಕಾರಣವಾಗಿತ್ತು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!