ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿ 300ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಬುಲ್ಘಾನ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ 300 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಲೋನಾರ್‌ನ ಸೋಮನಾಥ ಗ್ರಾಮದಲ್ಲಿ ನಡೆದ ಹರಿಣಂ ಸಪ್ತಾಹದ ಕಡೆಯ ದಿನದಂದು ಪ್ರಸಾದ ಸೇವಿಸಿ ಜನರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆಯಾಗಿದ್ದು, ಆಸ್ಪತ್ರೆಯ ಹೊರಗೂ ಚಿಕಿತ್ಸೆ ನೀಡಲಾಗುತ್ತಿದೆ.

ಹೊಟ್ಟೆನೋವು, ವಾಕರಿಕೆ ಹಾಗೂ ವಾಂತಿಯಿಂದ ಪ್ರಸಾದ ಸೇವಿಸಿದವರು ಬಳಲಿದ್ದಾರೆ. ಜಾಗದ ಕೊರತೆಯಿಂದಾಗಿ ಮರಗಳಿಗೆ ಕೊಕ್ಕೆ ಹಾಕಿ ಹಗ್ಗಗಳ ಮೇಲೆ ಸಲೈನ್ ಬಾಟಲಿಗಳನ್ನು ಅಳವಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!